ರಮಾನಾಥ ರೈ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ - ಸುಳ್ಯ ರಮಾನಾಥ ರೈ ಅಭಿಮಾನಿಗಳ ಮನವಿ



      ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಲ್ಲಿ ಉಳಿಯುವಂತೆ ಆಗಿದ್ದು, ಸುಮಾರು 23 ವರುಷಗಳಿಂದ ಸುಳ್ಯ ಕಾರ್ಯಕರ್ತರ ಆಶಾಕಿರಣರು ಹಾಗೂ ಪ್ರತಿಯೊಬ್ಬರ ವಿಶ್ವಾಸ ಗಳಿಸಿ ಹಲವಾರಿಗೆ ಉನ್ನತ ಸ್ಥಾನ ನೀಡು ವಲ್ಲಿಯು ಪ್ರಮುಖ ಕಾರಣಿಕರ್ತರು. ಶ್ರೀ ಬಿ. ರಮಾನಾಥ ರೈ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಲು ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿಮಾನಿಗಳಿಂದ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ. 
        ರಮಾನಾಥ ರೈ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಮಹೇಶ್ ಕರಿಕ್ಕಳ, ಸಂಚಾಲಕರಾದ ಪ್ರವೀಣ್ ಕೆಡೆಂಜಿ, ಗೌರ ವಾಧ್ಯಕ್ಷ ಬಾಲಕೃಷ್ಣ ಬಳ್ಳೇರಿ, ಸಹ ಸಂಚಾಲಕರಾದ ಗೋಕುಲ್ ದಾಸ್, ಕಾರ್ಯದರ್ಶಿ ಭವಾನಿ ಶಂಕರ ಕಲ್ಮಡ್ಕ ಹಾಗೂ ಪದಾ ಧಿಕಾರಿಗಳ ನೇತೃತ್ವದಲ್ಲಿ ಮನವಿ ನೀಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ

 
Tags

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget