ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಬಣ ಬಡಿದಾಟ ಇತ್ತಂಡಗಳ ಮಧ್ಯೆ ಮಾರಾಮಾರಿ

           


      ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಮತ್ತೆ ಸ್ಪೋಟಗೊಂಡು, ಬಡಿದಾಟ ಮಾರಾ ಮಾರಿ ನಡೆದ ಘಟನೆ ಶುಕ್ರವಾರ ನಡೆದಿದೆ.
      ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್‍ ಮುಖಂಡರಾದ  ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸ ಮರ, ಕೈ, ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾ ಯಿತು. ರಾಜ್ಯದಲ್ಲಿ ಕಾಂಗ್ರೇಸ್ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಹೀನಾಯ ಸೋಲು ಅರಗಿಸಕೊಳ್ಳಲಾಗದ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಒದ್ದಾಡುತ್ತಿರುವಾಗ ಎರಡು ಬಣಗಳ ಮಧ್ಯೆ ಉಂಟಾದ ಬಹಿರಂಗ ಗುದ್ದಾಟ ಉರಿಯುವ ಬೆಂಕಿಗೆ ತುಪ್ಪ ಸುರಿ ದಂತಾಗಿದೆ. 
     ಸೋಲಿನ ಪರಾಮರ್ಶೆ ಅವಲೋಕನ ಮಾಡಲು ಆಗಮಿಸಿದ ಕಾಮಗ್ರೇಸ್ ನಾಯಕರು ಬಣರಾಜಕೀಯದ ಒಳಬೇಗುದಿ ಹೊರಹಾಕಿದ್ದಾರೆ. ಕಾಂಗ್ರೇಸ್ ಉಸ್ತುವಾರಿ ಯಾಗಿದ್ದ ನಂದಕುಮಾರ್ ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೇಟ್ ಪಡೆದು ಸ್ಪರ್ಧಿಸುವ ಆಕಾಂಕ್ಷೆ ಇಟ್ಟು ಕೊಂಡಿದ್ದರು, ಇದರ ಪೂರ್ವಬಾವಿ ಎಂಬಂತೆ ಕ್ಷೇತ್ರದಾದ್ಯಂತ ಓಡಾಡುತ್ತಾ ಹಣ ಖರ್ಚ ಮಾಡಿ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಒಡನಾಟ ಸಂಪಾದಿಸಿದ್ದರು. ಕೃಷ್ಣ ಅವರು ಕೂಡಾ ಉಸ್ತುವಾರಿಯಾಗುದ್ದುಕೊಂಡು ತನ್ನದೇ ರೀತಿಯಲ್ಲಿ ಕ್ಷೇತ್ರದಲ್ಲಿ ಓಡಾಟ ನಡೆಸಿಕೊಂಡು ಮಿಂಚುತ್ತಿದ್ದರು. ಕೊನೆ ಗಳಿಗೆಯಲ್ಲಿ ಕೃಷ್ಣಪ್ಪ ಅವರಿಗೆ ಟಿಕೇಟು ಗೋಷಣೆಯಾದ ಬಳಿಕ ನಂದಕುಮಾರ್ ಅಭಿಮಾನಿಗಳು ತಮ್ಮದೇ ತಂಡ ಕಟ್ಟಿಕೊಂಡು ಕೃಷ್ಣಪ್ಪ ಅವರ ಬದಲಿಗೆ ನಂದಕುಮಾರ್ ಅವರಿಗೆ ಬಿಫಾರಂ ನೀಡುವಂತೆ ನಾನಾ ರೀತಿಯ ಒತ್ತಡ ಹಾಕಿದ್ದರೂ ಕೃಷ್ಣಪ್ಪ ಅವರೇ ಅಭ್ಯರ್ಥಿಯಾಗಿ ಉಳಿದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಪಕ್ಷದ ಮುಖಂಡರು ಎರಡೂ ಬಣಗಳನ್ನು ಸೇರಿಸಿ ತೇಪೆ ಹಚ್ಚುವ ಕಾರ್ಯ ಮಾಡಿದರೂ  ಮುಖಂಡರು ತಿರುಗಿ ಹೋದ ಬಳಿಕ ತೇಪೆ ಹರಿದು ಹಂಚಿ ಹೋಗಿತ್ತು. ಕೆಲವು ಮುಖಂಡರು ಒಗ್ಗಟ್ಟಿನ ಮಂತ್ರ ಜಪಿ ಸಿದ್ದರೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲಾ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ದುಡಿದು ಪಕ್ಷವನ್ನು ಗೆಲ್ಲಿಸುವಲ್ಲಿ ವಿಫಲರಾದರು.
      ಬಳಿಕ ನಡೆದು ಬೆಳವಣಿಗೆಯಲ್ಲಿ ಕೆಲವು ನಾಯಕರಿಗೆ ಪಕ್ಷ ವಿರೋಧಿ ಚಟುವಟಿಕೆಯ ಪಟ್ಟ ಕಟ್ಟಿ ಪಕ್ಷದಿಂದ ಉಚ್ಚಾ ಟಿಸಲಾಗಿತ್ತು. ಉಚ್ಚಾಟಿತರು ಇದರಿಂದ ಕೆಂಡಾಮಂಡಲಾಗಿ ದ್ದರು. ಕೆಲವರು ಪತ್ರಿಕಾ ಹೇಳಿಕೆ ನೀಡಿ ಅಕ್ರೋಶ ವ್ಯಕ್ತಪಡಿಸಿದ್ದರೆ, ಇನ್ನು ಕೆಲವು ನಾಯಕರು ನ್ಯಾಯಕ್ಕಾಗಿ ದೈವದ ಮೊರೆ ಹೋಗಿದ್ದರು. ಬುಧವಾರ ರಾಹುಲ್ ಗಾಂಧಿಯವ ಅವರ ಸಂಸತ್ ಸದಸ್ಯತನ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ  ಉಚ್ಚಾಟಿತ ನಾಯಕರು ಭಾಗವಿಸಿ ತಮ್ಮ ಪಕ್ಷ ನಿಷ್ಠೆಯನ್ನು ಪ್ರದರ್ಶಿಸಿದ್ದರು. ಇದು ಕೃಷ್ಣಪ್ಪ ಬಣದವರ ಪಿತ್ತ ನೆತ್ತಿಗೇರಸಿತ್ತು. ಇದೇ ಬೇಗುದಿ ಕಡಬದ ಪರಾಮರ್ಶೆ ಸಭೆಯಲ್ಲಿ ಸ್ಪೋಟಗೊಂಡಿದೆ. ಅಂಬೇಡ್ಕರ್ ಭವನದಲ್ಲಿ ಸಭೆ ಆರಂಭವಾಗಿ ಉಚ್ಚಾಟಿತ ಮುಖಂಡರು ಆಗಮಿಸತ್ತಿದ್ದಂತೆ ಕೃಷ್ಣಪ್ಪ ಅವರ  ಬಣದ ಅಕ್ರೋಶಕ್ಕೆ ಕಾರಣವಾಯಿತು. ಸಭೆ ಮಾತಿನ ಚಕಮುಖಿ ಮೂಲಕವೇ ಪ್ರಾರಂಭವಾಯಿತು. ಸ್ವತಃ ಕೃಷ್ಣಪ್ಪ ಅವರೇ ಉಚ್ಚಾಟಿತ ಮುಖಂಡರಿಗೆ ನೀವು ಈ ಸಭೆಗೆ ಯಾಕೆ ಬಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇಲ್ಲವೇ ಎಂದು ಛೇಡಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಖಂಡರೋರ್ವರು ಸಭೆಯಲ್ಲಿ ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ಚಾಟಿತರು ಭಾಗವಹಿಸಲು ಅವಕಾಶವಿದೆಯೇ ಎಂದು ಪ್ರಶಸ್ನಿಸಿದರು. ಅಷ್ಟೇ ಸಾಕಾಯಿತು ಮಾತಿನಚಕಮುಖಿ, ಪರಸ್ಪರ ಹಲ್ಲೆ, ತಳ್ಳಾಟ ನಡೆಯುವ ತನಕ ಮುಟ್ಟಿತು. ಕೃಷ್ಣಪ್ಪ ಬಣದ ಮೂರು ನಾಲ್ಕು ಮಂದಿ ಮುಖಂಡರು ನಂದಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರದಂತೆ ನಾಲ್ವರ ಮೇಲೆ ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದೆ. ಮಾರಾಮಾರಿ ನಡೆದಿರುವ ವಿಡಿಯೋಗಳು ಲಭ್ಯವಾಗಿದೆ. ನಂದಕುಮಾರ್ ಬಣದ ಸಾಮಾಜಿಕ ಜಾಲತಾಣ ನಿರ್ವಹಣ ಮಾಡಿದ ಮುಖಂಡ ರೋರ್ವರನ್ನು ಎಳೆದಾಡಿಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಮಧ್ಯೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿ ಗೊಳಿಸಿದ್ದಾರೆ. ಆದರೂ ಇತ್ತಂಡಗಳ ಮಧ್ಯೆ ಅಸಮಾಧಾನ, ಸಿಟ್ಟು ಸೇಡು ಬೂದಿ ಮುಚ್ಚಿದ ಕೆಂಡದಂತಿದ್ದು ಕೊತಕೊತನೆ ಕುದಿಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಹಿಂದೆ ಕೂಡಾ ಒಮ್ಮೆ ಕಡಬದಲ್ಲಿ ಪಕ್ಷದ ಕಛೇರಿಯಲ್ಲಿಯೇ ಇತ್ತಂಡಗಳ ಮಧ್ಯೆ ವಾಕ್ಸಮರ ನಡೆದು ಕೈಮಿಲಾಯಿಸುವ ಹಂತಕ್ಕೆ ಹೋಗಿತ್ತು ಎಂದು ಕೆಲವು ಮುಖಂಡರು ಹೇಳಿಕೊಳ್ಳುತ್ತಿ ದ್ದಾರೆ.






















       



 

Tags

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget